Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:10 - ಕನ್ನಡ ಸಮಕಾಲಿಕ ಅನುವಾದ

10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:10
26 ತಿಳಿವುಗಳ ಹೋಲಿಕೆ  

“ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ.


ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.


ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.


ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ,’ ಎಂದು ಯೆಹೋವ ದೇವರು ಸಾರುತ್ತಿದ್ದಾರೆ.”


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.


ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.


“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.


“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”


ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು