Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:12 - ಕನ್ನಡ ಸಮಕಾಲಿಕ ಅನುವಾದ

12 ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:12
46 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”


ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.


ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.


ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;


ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು