Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:7
37 ತಿಳಿವುಗಳ ಹೋಲಿಕೆ  

ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


“ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?


ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ.


ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.


ಈ ಯೆಹೂದದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ, ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತನಾಡುವನು.


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು