Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:17 - ಕನ್ನಡ ಸಮಕಾಲಿಕ ಅನುವಾದ

17 “ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:17
41 ತಿಳಿವುಗಳ ಹೋಲಿಕೆ  

ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.


ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,


ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.


ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.


ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.


ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.


“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು