Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:19 - ಕನ್ನಡ ಸಮಕಾಲಿಕ ಅನುವಾದ

19 ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:19
13 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.


ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.


ಅವರು ಅವಳನ್ನು ಹೂಳಿಡಲು ಹೋದಾಗ, ಅವಳ ತಲೆ ಬುರುಡೆಯೂ, ಕಾಲುಗಳೂ, ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಆದ್ದರಿಂದ ಅವರು ತಿರುಗಿಬಂದು ಅವನಿಗೆ ತಿಳಿಸಿದರು.


“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.


ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.


ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.


ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು