Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:24 - ಕನ್ನಡ ಸಮಕಾಲಿಕ ಅನುವಾದ

24 “ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:24
16 ತಿಳಿವುಗಳ ಹೋಲಿಕೆ  

ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.


“ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?


ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”


ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು