Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಲ್ಲೇ ಸಾಯುವಿರಿ, ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋಯಾಚೀನನೇ, ನೀನು ನಿನ್ನ ದೇಶಕ್ಕೆ ಹಿಂದಿರುಗಬೇಕೆಂದು ಅಪೇಕ್ಷಿಸಿದರೂ ನಿನಗೆ ಬರಲು ಸಾಧ್ಯವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:27
11 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.


ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.


ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ. ಯೆಹೋವ ದೇವರೇ, ನಿಮ್ಮಲ್ಲೇ ನನ್ನ ಪ್ರಾಣವನ್ನು ಇಟ್ಟಿದ್ದೇನೆ.


ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ.


ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?


ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು