Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:3
49 ತಿಳಿವುಗಳ ಹೋಲಿಕೆ  

ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ.


ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.


ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.


ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.


ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು