Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ’” ಎಂದು ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:5
22 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


“ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ,


ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.


“ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,


ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು.


ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


“ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು