Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:8 - ಕನ್ನಡ ಸಮಕಾಲಿಕ ಅನುವಾದ

8 “ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:8
13 ತಿಳಿವುಗಳ ಹೋಲಿಕೆ  

“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:


ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.


ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ.


ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”


ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.


ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು