Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:12 - ಕನ್ನಡ ಸಮಕಾಲಿಕ ಅನುವಾದ

12 “ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಇಳುಮೇಡುಗಳಿಗೆ ಸಮಾನವಾಗುವದು; ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರುಷದ ಕೇಡನ್ನು ಬರಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅವರನ್ನು ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:12
18 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”


ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.


ಅಂಥವರ ಮಾರ್ಗವು ಕತ್ತಲೆಯೂ ಜಾರುವಿಕೆಯೂ ಆಗಿರಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ಜೀವಿಸುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.


ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು