ಯೆರೆಮೀಯ 23:16 - ಕನ್ನಡ ಸಮಕಾಲಿಕ ಅನುವಾದ16 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ. ಅಧ್ಯಾಯವನ್ನು ನೋಡಿ |