Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:5 - ಕನ್ನಡ ಸಮಕಾಲಿಕ ಅನುವಾದ

5 “ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:5
49 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.


ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.


ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


“ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’


ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು