Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:6 - ಕನ್ನಡ ಸಮಕಾಲಿಕ ಅನುವಾದ

6 ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:6
50 ತಿಳಿವುಗಳ ಹೋಲಿಕೆ  

ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


“ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”


ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.


ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.


“ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


“ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.


ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು