Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ನನ್ನನ್ನು - ಯೆರೆಮೀಯನೇ, ಏನು ನೋಡುತ್ತೀ ಎಂದು ಕೇಳಲು ನಾನು - ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ; ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:3
10 ತಿಳಿವುಗಳ ಹೋಲಿಕೆ  

ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.


ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.


ಆಗ ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು