Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:1 - ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:1
13 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:


ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.


ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ:


ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು:


ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು