Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:13 - ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:13
10 ತಿಳಿವುಗಳ ಹೋಲಿಕೆ  

ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.


ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.


“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು