Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಅದನ್ನು ಕುಡಿದು ಓಲಾಡುವರು, ನಾನು ಕಳಿಸುವ ಖಡ್ಗದಿಂದ ಹುಚ್ಚುಚ್ಚಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು, ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:16
16 ತಿಳಿವುಗಳ ಹೋಲಿಕೆ  

ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.


ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.


ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.


“ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”


“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು