Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:7 - ಕನ್ನಡ ಸಮಕಾಲಿಕ ಅನುವಾದ

7 “ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಿಮ್ಮ ಕೈ ಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ಕೇಡನ್ನು ತಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀವು ನನ್ನ ಮಾತನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನ್ನು ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನ್ನು ಉಂಟುಮಾಡಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:7
15 ತಿಳಿವುಗಳ ಹೋಲಿಕೆ  

ಏಕೆಂದರೆ ಅವರ ತಂದೆಗಳು ಈಜಿಪ್ಟಿನಿಂದ ಹೊರಟ ದಿವಸ ಮೊದಲುಗೊಂಡು, ಇಂದಿನವರೆಗೂ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ, ಎಂದು ಹೇಳುತ್ತಾರೆ,” ಎಂಬುದೇ.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು