Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:8 - ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ನುಡಿಯನ್ನು ಕೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ - ನೀವು ನನ್ನ ಮಾತುಗಳನ್ನು ಕೇಳದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸರ್ವಶಕ್ತನಾದ ಯೆಹೋವನು ಹೀಗೆಂದನು: “ನೀವು ನನ್ನ ಸಂದೇಶಗಳನ್ನು ಕೇಳಿ ಅದರಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:8
8 ತಿಳಿವುಗಳ ಹೋಲಿಕೆ  

“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು