Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:16
19 ತಿಳಿವುಗಳ ಹೋಲಿಕೆ  

ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.


ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.


ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.


ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.


ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.


ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು