Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:6 - ಕನ್ನಡ ಸಮಕಾಲಿಕ ಅನುವಾದ

6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:6
20 ತಿಳಿವುಗಳ ಹೋಲಿಕೆ  

‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”


ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿತೆರೆದಿದ್ದಾರೆ. “ನಾವು ಆಕೆಯನ್ನು ನುಂಗಿಬಿಟ್ಟೆವು. ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ. ಅದನ್ನು ನಾವು ಕಣ್ಣಾರೆ ಕಂಡಿದ್ದೇವೆ,” ಎಂದು ಅವರು ಕೊಚ್ಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು