Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:11 - ಕನ್ನಡ ಸಮಕಾಲಿಕ ಅನುವಾದ

11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವದೋ ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಗೆಯ್ದು ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:11
8 ತಿಳಿವುಗಳ ಹೋಲಿಕೆ  

“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.


ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.


ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


“ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.


ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು