Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:7 - ಕನ್ನಡ ಸಮಕಾಲಿಕ ಅನುವಾದ

7 ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:7
29 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ.


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:


ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು:


ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು