Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನು. ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:4
20 ತಿಳಿವುಗಳ ಹೋಲಿಕೆ  

“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


“ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.


“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.


“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.


ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.


ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.


ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ


ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು