Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:13 - ಕನ್ನಡ ಸಮಕಾಲಿಕ ಅನುವಾದ

13 ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:13
33 ತಿಳಿವುಗಳ ಹೋಲಿಕೆ  

ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.


ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.


ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ.


ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.


ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು