Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:27 - ಕನ್ನಡ ಸಮಕಾಲಿಕ ಅನುವಾದ

27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರುವಲ್ಲಿ, ನಿಮ್ಮ ಮಧ್ಯೆ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಖಂಡಿಸಲಿಲ್ಲವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:27
13 ತಿಳಿವುಗಳ ಹೋಲಿಕೆ  

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.


ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು