Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:7 - ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:7
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು.


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


“ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು