Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:2 - ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:2
22 ತಿಳಿವುಗಳ ಹೋಲಿಕೆ  

“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.


“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.


ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.


ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


ಕಳ್ಳನಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.


ಅವಳು ಕೂಗಾಟದವಳು, ಹಟಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು