Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:22 - ಕನ್ನಡ ಸಮಕಾಲಿಕ ಅನುವಾದ

22 “ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:22
21 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು