Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:23 - ಕನ್ನಡ ಸಮಕಾಲಿಕ ಅನುವಾದ

23 ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:23
25 ತಿಳಿವುಗಳ ಹೋಲಿಕೆ  

ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.


ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ. ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ. ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ.


ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.


ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು