Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:24 - ಕನ್ನಡ ಸಮಕಾಲಿಕ ಅನುವಾದ

24 ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ ನಮ್ಮ ತಂದೆಗಳ ಕಷ್ಟವನ್ನೂ, ಅವರ ಕುರಿಗಳನ್ನೂ, ಅವರ ದನಗಳನ್ನೂ, ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡು ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:24
12 ತಿಳಿವುಗಳ ಹೋಲಿಕೆ  

“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.


ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.


ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’


ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


“ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?


ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.


ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು