Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:6
24 ತಿಳಿವುಗಳ ಹೋಲಿಕೆ  

“ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.


ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.


ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ.


ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ, ಅನ್ಯದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಪಿತೃಗಳು ಯೆಹೋವ ದೇವರ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದುಬಿಟ್ಟರು. ಅವರು ಮಾಡಿದ ಪ್ರಕಾರ ಮಾಡಲಿಲ್ಲ.


ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


“ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು