Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:17 - ಕನ್ನಡ ಸಮಕಾಲಿಕ ಅನುವಾದ

17 ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:17
36 ತಿಳಿವುಗಳ ಹೋಲಿಕೆ  

ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.


“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.


ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.


ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.


ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ.


ನೀನು ತ್ಯಜಿಸಿದ ಮನನೊಂದಿರುವ ಯೌವನದ ಪತ್ನಿಯ ಹಾಗೆ ತಿರಸ್ಕಾರಹೊಂದಿರುವೆ. ಯೆಹೋವ ದೇವರು ನಿನ್ನನ್ನು ಕರೆದಿದ್ದಾನೆ, ಎಂದು ನಿನ್ನ ದೇವರು ಹೇಳುತ್ತಾರೆ.


ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು