Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:18 - ಕನ್ನಡ ಸಮಕಾಲಿಕ ಅನುವಾದ

18 “ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:18
38 ತಿಳಿವುಗಳ ಹೋಲಿಕೆ  

ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


“ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶದಿಂದಲೂ ರಕ್ಷಿಸುವೆನು; ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ.


“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು.


ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.


ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,


ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.


ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.


ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’


ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


“ಇದಲ್ಲದೆ ದಾವೀದನ ಮನೆಯ ಘನತೆಯೂ, ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ, ಯೆಹೋವ ದೇವರು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವರು.


ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು