Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:3
45 ತಿಳಿವುಗಳ ಹೋಲಿಕೆ  

ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”


‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು.


ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.


ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”


ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಮೊದಲಿನ ಮಂದಿರವನ್ನು ಕಂಡಿದ್ದ ವೃದ್ಧರಾದ ಯಾಜಕರೂ ಲೇವಿಯ ಅನೇಕ ಕುಟುಂಬಗಳ ಪ್ರಮುಖರೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ಮುಂದೆ ಹಾಕುತ್ತಿರುವಾಗ ದೊಡ್ಡ ಶಬ್ದದಿಂದ ಅತ್ತರು.


ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ,


ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.


ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು.


ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.


ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು