Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:20
27 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.


“ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು.


ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ, ಕೀರ್ ಹೆರೆಸೆಥ್ ನಿಮಿತ್ತ ನನ್ನ ಅಂತರಂಗವೂ ಕಿನ್ನರಿಯಂತೆ ಮಿಡಿಯುತ್ತಾ ದುಃಖಿಸುತ್ತಿದೆ.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.


ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.


ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು