Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:21 - ಕನ್ನಡ ಸಮಕಾಲಿಕ ಅನುವಾದ

21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:21
23 ತಿಳಿವುಗಳ ಹೋಲಿಕೆ  

ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.


ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,


ನಿಮ್ಮಲ್ಲಿ ಯಾರು ಬಲಹೊಂದಿರುವರೋ, ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.


ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.


ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


“ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು