Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತ್ತು, ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:2
15 ತಿಳಿವುಗಳ ಹೋಲಿಕೆ  

ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ, ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.


“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.


ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು.


ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:


ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು