Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:22 - ಕನ್ನಡ ಸಮಕಾಲಿಕ ಅನುವಾದ

22 ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:22
28 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.


ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


“ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ.


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು