Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:23 - ಕನ್ನಡ ಸಮಕಾಲಿಕ ಅನುವಾದ

23 ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:23
32 ತಿಳಿವುಗಳ ಹೋಲಿಕೆ  

ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,


ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು