Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:25 - ಕನ್ನಡ ಸಮಕಾಲಿಕ ಅನುವಾದ

25 ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನಾದ ಯೆಹೋವನೇ, ನೀನು ನನಗೆ - ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ ಎಂದು ಅಪ್ಪಣೆಕೊಟ್ಟಿ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:25
11 ತಿಳಿವುಗಳ ಹೋಲಿಕೆ  

“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.


ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.


“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.


ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,


‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು