Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:28 - ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಹೀಗೆಂದನು: “ಜೆರುಸಲೇಮ್ ನಗರವನ್ನು ನಾನು ಕೂಡಲೇ ಬಾಬಿಲೋನಿನ ಸೈನ್ಯಕ್ಕೂ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನ್ನು ವಶಪಡಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:28
11 ತಿಳಿವುಗಳ ಹೋಲಿಕೆ  

ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು.


“ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ:


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು