Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:31 - ಕನ್ನಡ ಸಮಕಾಲಿಕ ಅನುವಾದ

31 ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪ ರೋಷಗಳಿಗೆ ಆಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:31
17 ತಿಳಿವುಗಳ ಹೋಲಿಕೆ  

ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು