Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:33 - ಕನ್ನಡ ಸಮಕಾಲಿಕ ಅನುವಾದ

33 ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:33
17 ತಿಳಿವುಗಳ ಹೋಲಿಕೆ  

ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.


ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”


ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.


“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು