Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:5 - ಕನ್ನಡ ಸಮಕಾಲಿಕ ಅನುವಾದ

5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:5
20 ತಿಳಿವುಗಳ ಹೋಲಿಕೆ  

ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.


‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”


ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”


ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.


ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು,


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.


“ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು.


ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು