Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:12 - ಕನ್ನಡ ಸಮಕಾಲಿಕ ಅನುವಾದ

12 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತವೂ ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವದಕ್ಕೆ ಮತ್ತೆ ಆಸರೆಯಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಈ ಸ್ಥಳವು ಈಗ ಬರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಬರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:12
17 ತಿಳಿವುಗಳ ಹೋಲಿಕೆ  

ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ.


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.


ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.


ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸುವುದು ಎಲ್ಲಿ? ಮಧ್ಯಾಹ್ನದಲ್ಲಿ ನೀನು ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ? ನನಗೆ ತಿಳಿಸು. ನಾನು ನಿನ್ನ ಜೊತೆಗಾರರ ಮಂದೆಗಳ ಬಳಿಯಲ್ಲಿ ಮುಸುಕು ಹಾಕಿದವಳಂತೆ ಏಕೆ ಅಲೆಯಬೇಕು?


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು