Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:14 - ಕನ್ನಡ ಸಮಕಾಲಿಕ ಅನುವಾದ

14 “ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದೆ. ನನ್ನ ವಾಗ್ದಾನವು ನೆರವೇರುವ ಸಮಯ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:14
31 ತಿಳಿವುಗಳ ಹೋಲಿಕೆ  

“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.


ಏಕೆಂದರೆ ಅನೇಕ ಪ್ರವಾದಿಗಳು ಮತ್ತು ಅರಸರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು