Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:24 - ಕನ್ನಡ ಸಮಕಾಲಿಕ ಅನುವಾದ

24 “ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:24
29 ತಿಳಿವುಗಳ ಹೋಲಿಕೆ  

ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.


ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.


ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’


ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.


“ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ, ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತುಹೋಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು