Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:15 - ಕನ್ನಡ ಸಮಕಾಲಿಕ ಅನುವಾದ

15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ; ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆಮಾಡಿಕೊಂಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:15
15 ತಿಳಿವುಗಳ ಹೋಲಿಕೆ  

ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


“ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.


ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.


ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು.


ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.


ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು